ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ಸಿಬ್ಬಂದಿ ವಿರುದ್ಧ ಲೋಕಾಯುಕ್ತ ನ್ಯಾ. ಭಾಸ್ಕರ್ ರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


 ತಮ್ಮ ಕೋಲಾರ ಭೇಟಿ ಸಂದರ್ಭದಲ್ಲಿ ಸ್ಥಳೀಯ ಸರ್ಕಾರಿ ಕಾಲೇಜುಗಳ ಅವ್ಯವಸ್ಥೆ ಹಾಗೂ ಉಪನ್ಯಾಸಕರ ಗೈರು ಹಾಜರಿ ಹಿನ್ನೆಲೆಯಲ್ಲಿ ಇಲಾಖೆ ಆಯುಕ್ತರು ಹಾಗೂ ಅಧಿಕಾರಿಗಳ ಜತೆ ನಡೆಸಿದ ಸಭೆಯಲ್ಲಿ ಈ ಅಸಮಾಧಾನ ವ್ಯಕ್ತಪಡಿಸಿದ ಅವರು, ಮೂರು ತಿಂಗಳಿಗೊಮ್ಮೆ ಕಾಲೇಜುಗಳ ಸ್ಥಿತಿಗತಿ ಹಾಗೂ ನಿರ್ವಹಣೆ ಸಂಬಂಧ ಲೋಕಾಯುಕ್ತಕ್ಕೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. 

ಇದರ ಜತೆಗೆ ನಾಲ್ಕು ಮಹತ್ವದ ಸೂಚನೆಯನ್ನು ಇಲಾಖೆಗೆ ನೀಡಿದ್ದಾರೆ. 

Courtesy: Kannada Prabha, August 3, 2013